ಜನಪರ ಬಜೆಟ್ ವಸ್ತು ಪ್ರದರ್ಶನ ಇಂದು (22ನೇ ಮಾರ್ಚ್)

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾರ್ಚ್ 21 ರಂದು ಬೆಳಿಗ್ಗೆ 10.30 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಆವರಣದಲ್ಲಿ ಜನಪರ ಬಜೆಟ್ 2017-18 – ವಸ್ತು ಪ್ರದರ್ಶನ ಸಮಾರಂಭವನ್ನು ಹಮ್ಮಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸ್ತು ಪ್ರದರ್ಶನದ ಉದ್ಫಾಟನೆಯನ್ನು ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರು ಉಪಸ್ಥಿತರಿರುವರು.
ನಗರಾಭಿವೃಧಿ ಸಚಿವ ಹಾಗೂ ಶಿವಾಜಿನಗರದ ವಿಧಾನಸಭಾ ಕ್ಷೇತ್ರ ಶಾಸಕ ಆರ್. ರೋಷನ್ ಬೇಗ್, ಕರ್ನಾಟಕ ವಿಧಾನ ಪರಿಷತ್ ನಾಯಕ ಕೆ.ಎಸ್. ಈಶ್ವರಪ್ಪ ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ .


ನಿಮ್ಮ ಟಿಪ್ಪಣಿ ಬರೆಯಿರಿ